ಶಿರಸಿ ಪೋಲೀಸರ ಮಿಂಚಿನ ಕಾರ್ಯಾಚರಣೆ: ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಬಾಷಾಸಾಬ್ ಬಂಧನ

ಶಿರಸಿ ಪೋಲೀಸರ ಮಿಂಚಿನ ಕಾರ್ಯಾಚರಣೆ: ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಬಾಷಾಸಾಬ್ ಬಂಧನ



ಶಿರಸಿ: ಕಾಲೇಜು ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆಯೊಂದಿಗೆ ಬಂಧಿಸಿ, ಆರೋಪಿಯಿಂದ 2 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಸಿದ್ದಾಪುರ ರಸ್ತೆಯ ನಿಲೇಕಣಿ ಬಳಿ ನಡೆದಿದೆ.


ಶಿಗ್ಗಾಂವ ತಾಲೂಕಿನ ಬಾಷಾಸಾಬ್ ಬಂಧಿತ ಆರೋಪಿಯಾಗಿದ್ದಾನೆ. ಈತ ಬೆಳಗಾವಿಯಿಂದ ಗಾಂಜಾ ತಂದು ಇಲ್ಲಿನ ಯುವಕರಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಗಾಂಜಾ ಖರಿದೀಸಲು ಬಂದಿದ್ದ ಸುಮಾರು 10-15 ಯುವಕರು ಪೊಲೀಸರ ದಾಳಿಯ ವೇಳೆಗೆ ತಪ್ಪಿಸಿಕೊಂಡಿದ್ದು, ಅವರನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


ಬೆಳಗಾವಿಯ ಗಾಂಜಾ ದಲ್ಲಾಳಿಯನ್ನು ಹಿಡಿಯಲು ಈಗಾಗಲೇ ಒಂದು ತಂಡ ರಚನೆ ಮಾಡಲಾಗಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಡಿಎಸ್ಪಿ ಜಿ.ಟಿ.ನಾಯಕ, ಸಿಪಿಐ ಪ್ರದೀಪ ನೇತೃತ್ವದಲ್ಲಿ ಪಿಎಸ್ಐ ಶಿವಾನಂದ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement