ಇಡೀ ಊರಿನ ಖರ್ಚು ನೋಡಿಕೊಳ್ಳಬೇಕು: ಕೊರೊನಾ ಶಂಕಿತನಿಗೆ ಉಡುಪಿ ಡಿಸಿ ಫೈನ್

ಇಡೀ ಊರಿನ ಖರ್ಚು ನೋಡಿಕೊಳ್ಳಬೇಕು: ಕೊರೊನಾ ಶಂಕಿತನಿಗೆ ಉಡುಪಿ ಡಿಸಿ ಫೈನ್


ಉಡುಪಿ: ಉಡುಪಿ ಜಿಲ್ಲೆಯ ಕಾಪು ಮೂಲದ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯೊಬ್ಬನ ಮೇಲೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ತುಂಬಾನೇ ಗರಂ ಆಗಿದ್ದಾರೆ. ಆತನ ಸಂಪರ್ಕಕ್ಕೆ ಬಂದ ಎಲ್ಲ ರೋಗಿಗಳ ವೆಚ್ಚ ಅವನೇ ಭರಿಸಬೇಕು ಎಂದು ಗುಡುಗಿದ್ದಾರೆ.


ಉಡುಪಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಹೋಮ್ ಕ್ವಾರಂಟೈನ್‍ನಲ್ಲಿ ಇರಬೇಕಾದ ವ್ಯಕ್ತಿ ಕ್ರಿಕೆಟ್ ಆಡಲು ಹೋಗಿದ್ದಾನೆ. ಆತ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಎಲ್ಲ ಕಡೆ ಓಡಾಡಿದ್ದಾನೆ. ಹೋಮ್ ಕ್ವಾರಂಟೈನ್‍ನ ಸೂಚನೆ ನೀಡಿದರೂ ಕೂಡ ಆ ವ್ಯಕ್ತಿ ಹೊರಗಡೆ ಎಲ್ಲಾ ಕಡೆ ತಿರುಗಾಡಿದ್ದಾನೆ. ಆತನಿಂದ ಎಲ್ಲರ ವೆಚ್ಚವನ್ನು ವಸೂಲಿ ಮಾಡುತ್ತೇನೆ ಎಂದು ಹೇಳಿದರು.


ಇಡೀ ಊರಿಗೆ ಆದ ವೆಚ್ಚವನ್ನು ಆ ರೋಗಿಯೇ ಕೊಡಬೇಕು. ಆ ವ್ಯಕ್ತಿಯ ಮೇಲೆ ಕ್ರಿಮಿನಲ್ ಕೇಸನ್ನು ಕೂಡ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಆತನೊಬ್ಬನೇ ಅಲ್ಲ, ಕ್ವಾರಂಟೈನ್ ಸಂದರ್ಭದಲ್ಲಿ ಉದ್ಧಟತನ ತೋರಿದ ಎಲ್ಲರಿಂದಲೂ ಕೂಡ ವೆಚ್ಚವನ್ನು ವಸೂಲಿ ಮಾಡುತ್ತೇವೆ. ಕಾನೂನನ್ನು ಉಲ್ಲಂಘಿಸಿದವರಿಗೆ ಎರಡು ವರ್ಷಗಳ ಕಾಲ ಜೈಲುವಾಸ ವಿಧಿಸುವ ಅವಕಾಶ ಇದೆ ಎಂದು ಅವರು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement