ಅಂಕೋಲಾ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ - ಓರ್ವ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಅಂಕೋಲಾ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ - ಓರ್ವ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ


ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಾಸ್ತಿಕಟ್ಟೆ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಆಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ. 


ಕಾರಿನಲ್ಲಿದ್ದ 4 ಮಂದಿಯಲ್ಲಿ 2 ಪುರುಷರು ಮತ್ತು ಎರಡು ಮಹಿಳೆಯರು ಹಾಗೂ ಇವರು ಧಾರವಾಡ ಕೃಷಿ ಇಲಾಖೆಯ ಉದ್ಯೋಗಿಗಳು ಎಂಬ ಮಾಹಿತಿ ತಿಳಿದು ಬಂದಿದೆ. ಮೂರು ಗಾಯಾಳುಗಳನ್ನು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸಾಗಿಸಲಾಗಿದೆ



ಕಾರು ಅಂಕೋಲ ದಿಂದ ಯಲ್ಲಾಪುರಕ್ಕೆ ಸಾಗುತ್ತಿತ್ತು ಎನ್ನಲಾಗಿದೆ ಹಾಗೂ ಬಸ್ ಯಲ್ಲಾಪುರದಿಂದ ಅಂಕೋಲಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ. ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement