ಹೊನ್ನಾವರ: ಬೈಕ್ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ತಲೆಗೆ ಗಂಭೀರ ಗಾಯ

ರವಿವಾರದಂದು ಹೊನ್ನಾವರ ತಾಲೂಕಿನ ಹಡಿನಬಾಳ ಸಮೀಪದ ಗುಂಡಿಬೈಲ್ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.


ಸುಬ್ರಮಣ್ಯ ಚಿಟ್ಟಾಣಿಯವರು ಪದ್ಮಶ್ರೀ ಪುರಸ್ಕೃತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಪುತ್ರನಾಗಿದ್ದು ತನ್ನ ತಂದೆ ನಡೆದು ಬಂದ ಹಾದಿಯಲ್ಲಿ ಸಾಗಿ ಯಕ್ಷಗಾನ ಕ್ಷೇತ್ರದಲ್ಲಿ ಸಾಕಷ್ಟು ಹೆಸರನ್ನು ಗಳಿಸಿದ್ದಾರೆ.


ದುರದೃಷ್ಟವಶಾತ್ ರವಿವಾರದಂದು ಸಂಭವಿಸಿದ ಅಪಘಾತದಲ್ಲಿ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ಪ್ರಾಥಮಿಕ ಚಿಕಿತ್ಸೆಯನ್ನು ಹೊನ್ನಾವರದ ಶ್ರೀದೇವಿ  ಆಸ್ಪತ್ರೆಯಲ್ಲಿ ನೀಡಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗೆ ದೂರದ ಜಿಲ್ಲೆಯ ಆಸ್ಪತ್ರೆಗೆ (ಮಾಹಿತಿ ಅಪೂರ್ಣ) ಸಾಗಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಹೊನ್ನಾವರ: ಬೈಕ್ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ತಲೆಗೆ ಗಂಭೀರ ಗಾಯ


ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement