ಪ್ರತಿ ವರ್ಷ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮಗಳು ನಡೆಯುವಾಗ ಶಾಶ್ವತ ಧ್ವಜಸ್ತಂಭದ ಅಗತ್ಯತೆಯನ್ನು ಗಮನಿಸಿದ ಶ್ಯಾಮಲಾ ಕಿಮ್ಮಪ್ಪ ಗೌಡ, ತಮ್ಮ ಕೈಗೆ ಬಂದ ಸರ್ಕಾರಿ ನೆರವನ್ನು ಸಮಾಜಮುಖಿ ಕಾರ್ಯಕ್ಕೆ ಬಳಸುವ ನಿರ್ಧಾರ ಕೈಗೊಂಡರು. ಈ ಹಿನ್ನೆಲೆಯಲ್ಲಿ ‘ಗೃಹಲಕ್ಷ್ಮೀ’ ಯೋಜನೆಯಿಂದ ಪಡೆದ ₹20,000 ಮೊತ್ತವನ್ನು ಅವರು ಸಂಪೂರ್ಣವಾಗಿ ಶಾಲೆಗೆ ದೇಣಿಗೆಯಾಗಿ ನೀಡಿದ್ದಾರೆ. ಈ ಹಣದಿಂದ ಶಾಲಾ ಆವರಣದಲ್ಲಿ ನೂತನ ಧ್ವಜಸ್ತಂಭ ನಿರ್ಮಾಣಕ್ಕೆ ಸಹಾಯವಾಗಲಿದೆ.
ಮಹಿಳೆಯ ಈ ಆದರ್ಶ ಕಾರ್ಯಕ್ಕೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಸರ್ಕಾರದ ಸಹಾಯಧನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಿರುವುದು ಶ್ಲಾಘನೀಯ. ಇಂತಹ ಮನೋಭಾವ ಇತರರಿಗೂ ಪ್ರೇರಣೆಯಾಗಬೇಕು” ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಸಹಕಾರ ಅತ್ಯಂತ ಅಗತ್ಯ. ಸೀಮಿತ ಸಂಪನ್ಮೂಲಗಳ ನಡುವೆಯೂ ಶಿಕ್ಷಣ ಸಂಸ್ಥೆಗಳಿಗೆ ನೆರವಾಗುವ ಇಂತಹ ಕಾರ್ಯಗಳು ಮಕ್ಕಳ ಭವಿಷ್ಯಕ್ಕೆ ಬಲ ನೀಡುತ್ತವೆ. ತಮ್ಮ ಕುಟುಂಬದ ಅಗತ್ಯಗಳ ನಡುವೆಯೂ ಸಮಾಜದ ಹಿತವನ್ನು ಮುಂದಿಟ್ಟ ಶ್ಯಾಮಲಾ ತಿಮ್ಮಪ್ಪ ಗೌಡ ಅವರ ನಡೆ ಎಲ್ಲರಿಗೂ ಮಾದರಿಯಾಗಿದೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.