ಮೈಸೂರು ಜಿಲ್ಲೆಯ ಮಧು (23) ಎಂಬ ಯುವಕ ಈಜಲು ಸಮುದ್ರಕ್ಕೆ ಇಳಿದಿದ್ದಾನೆ ಎನ್ನಲಾಗಿದೆ. ಈ ವೇಳೆ ಸಮುದ್ರದ ಅಲೆಗಳು ತೀವ್ರವಾಗಿದ್ದರಿಂದ ಯುವಕ ನೀರಿನೊಳಗೆ ಸಿಲುಕಿದ್ದು, ಪರಿಸ್ಥಿತಿ ಗಂಭೀರವಾಗಿತ್ತು.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳದಲ್ಲಿದ್ದ ಗೋಕರ್ಣದ ಮೆನ್ ಬೀಚ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ, ಜೀವರಕ್ಷಕರು ಹಾಗೂ ಸ್ಥಳೀಯರು ಸೇರಿ ತಕ್ಷಣ ಕಾರ್ಯಾಚರಣೆ ಆರಂಭಿಸಿದರು. ದೋಣಿ ಮತ್ತು ರಕ್ಷಣಾ ಸಾಧನಗಳ ನೆರವಿನಿಂದ ಯುವಕನನ್ನು ಸುರಕ್ಷಿತವಾಗಿ ಕರೆಯತ್ತ ಕರೆತರುವಲ್ಲಿ ಅವರು ಯಶಸ್ವಿಯಾದರು.
ರಕ್ಷಿಸಲಾದ ಯುವಕನಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಕೆಲ ಸಮಯ ಸಮುದ್ರ ತೀರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸಮುದ್ರದಲ್ಲಿ ಈಜುವಾಗ ಹವಾಮಾನ, ಅಲೆಗಳ ತೀವ್ರತೆ ಹಾಗೂ ಸ್ಥಳೀಯ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದ್ದು, ಪ್ರವಾಸಿಗರು ಹೆಚ್ಚಿನ ಎಚ್ಚರ ವಹಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.