ಮಂಗಳವಾರ ನಡೆದ ಕರಾವಳಿ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಪ್ರವಾಸಿಗರ ಜೀವಭದ್ರತೆ ಯಾವುದೇ ಸಂದರ್ಭದಲ್ಲೂ ಲೆಕ್ಕಾಚಾರಕ್ಕೆ ಒಳಪಡುವ ವಿಷಯವಲ್ಲ ಎಂದು ಒತ್ತಿ ಹೇಳಿದರು. “ಜಿಲ್ಲೆಯ ನೈಸರ್ಗಿಕ ಸೌಂದರ್ಯವನ್ನು ಆನಂದಿಸುವ ವೇಳೆ ಯಾವುದೇ ಜೀವಹಾನಿ ಸಂಭವಿಸಬಾರದು. ಅದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳಂತೆ, ಜಿಲ್ಲೆಯ ಎಲ್ಲಾ ಪ್ರವಾಸಿ ದೋಣಿ ನಿರ್ವಾಹಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಮುಂದಿನ 45 ದಿನಗಳ ಒಳಗೆ ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪೊಲೀಸ್ ಇಲಾಖೆ, ಬಂದರು ಇಲಾಖೆ, ಕರಾವಳಿ ಕಾವಲು ಪಡೆ, ಸ್ಥಳೀಯ ಆಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಸೂಕ್ತ ಅನುಮತಿ ಪಡೆದ ದೋಣಿಗಳಿಗೆ ಮಾತ್ರ ಕಾರ್ಯಾಚರಣೆಗೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಇನ್ನು ಕಡಲತೀರಗಳು ಮತ್ತು ಕರಾವಳಿ ತಾಣಗಳಲ್ಲಿ ಲೈಫ್ ಜಾಕೆಟ್ಗಳ ಕಡ್ಡಾಯ ಬಳಕೆ, ಹವಾಮಾನ ಎಚ್ಚರಿಕೆಗಳಿಗೆ ಅನುಗುಣವಾಗಿ ದೋಣಿ ಸಂಚಾರ ನಿಯಂತ್ರಣ, ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾಡಳಿತದ ಈ ಕ್ರಮಗಳಿಂದ ಮುಂದಿನ ದಿನಗಳಲ್ಲಿ ಕರಾವಳಿ ಪ್ರವಾಸೋದ್ಯಮ ಇನ್ನಷ್ಟು ಸುರಕ್ಷಿತವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.