ಸ್ಥಳೀಯ ಅಂಜುಮನ್ ಇಸ್ಲಾಂ ಸಂಸ್ಥೆಯ ಕೆಲ ಮುಸ್ಲಿಂ ಮುಖಂಡರು ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಗ್ರಾಮದೇವಿಗೆ ಉಡಿ ತುಂಬಿ ಗೌರವ ಸಲ್ಲಿಸಿದರು. ಅದರ ಜೊತೆಗೆ, ಒಂದು ದಿನ ಭಕ್ತರಿಗೆ ಪ್ರಸಾದ ವಿತರಣೆ ಮಾಡುವ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡು ಭಕ್ತರಿಗೆ ಊಟದ ವ್ಯವಸ್ಥೆ ಮಾಡಿದರು.
ಭಕ್ತರಿಗೆ ಆಹಾರವನ್ನು ಸರ್ವಿಸಿ ಆತ್ಮೀಯವಾಗಿ ಸೇವೆ ಸಲ್ಲಿಸಿದ ಈ ಘಟನೆ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಧರ್ಮ ಬೇರೆ ಇದ್ದರೂ ಮಾನವೀಯತೆ ಮತ್ತು ಪರಸ್ಪರ ಗೌರವ ಮುಖ್ಯ ಎಂಬ ಸಂದೇಶವನ್ನು ಈ ಘಟನೆಯು ನೀಡಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಈ ಸಂದರ್ಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕೋಮು ಸಾಮರಸ್ಯವನ್ನು ಪ್ರತಿಬಿಂಬಿಸುವ ಈ ಕಾರ್ಯಕ್ಕೆ ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಲಘಟಗಿಯಲ್ಲಿ ಕಂಡು ಬಂದ ಈ ಉದಾಹರಣೆ ಸಮಾಜದಲ್ಲಿ ಸೌಹಾರ್ದತೆಯನ್ನು ಬಲಪಡಿಸುವ ಉತ್ತಮ ಸಂದೇಶ ನೀಡುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.