Ticker

6/recent/ticker-posts
Responsive Advertisement

Uttarakannda: ಕಾರವಾರದಲ್ಲಿ ಅತಿಕ್ರಮಣ ವಿರುದ್ಧ ನಗರಸಭೆ ದಾಳಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಗರಸಭೆ ಅಧಿಕಾರಿಗಳು ರಸ್ತೆ ಮತ್ತು ಪಾದಚಾರಿ ಮಾರ್ಗಗಳ ಮೇಲೆ ನಡೆದಿದ್ದ ಅತಿಕ್ರಮಣಗಳ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಿದರು. ನಗರದ ವಿವಿಧ ಭಾಗಗಳಲ್ಲಿ ಬೀದಿ ವ್ಯಾಪಾರಿಗಳು ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ಗೂಡಂಗಡಿಗಳನ್ನು ಸ್ಥಾಪಿಸಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ಪಾದಚಾರಿ ಮಾರ್ಗಗಳು ಹಾಗೂ ಪಾರ್ಕಿಂಗ್ ಸ್ಥಳಗಳು ಕೂಡ ಗೂಡಂಗಡಿಗಳಿಂದ ಆವರಿಸಿಕೊಂಡಿದ್ದರಿಂದ ವಾಹನ ಸಂಚಾರ ಮತ್ತು ಜನಸಂಚಾರದಲ್ಲಿ ಅಡಚಣೆಗಳು ಹೆಚ್ಚಾಗಿದ್ದವು. ಈ ಬಗ್ಗೆ ಸಾರ್ವಜನಿಕರಿಂದ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರಸಭೆ ಕ್ರಮ ಕೈಗೊಂಡಿತು.

ನಗರದ ಪ್ರಮುಖ ರಸ್ತೆಗಳಾದ ಎಮ್.ಜಿ ರಸ್ತೆ ಮತ್ತು ಪಿಕಳೆ ರಸ್ತೆ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಅತಿಕ್ರಮಣ ಮಾಡಿದ ಮಳಿಗೆಗಳನ್ನು ತೆರವುಗೊಳಿಸಲಾಯಿತು. ಕಾರ್ಯಾಚರಣೆಯ ವೇಳೆ ರಸ್ತೆ ಮೇಲೆ ಇಟ್ಟಿದ್ದ ಫ್ರಿಜ್‌ಗಳು ಹಾಗೂ ಇತರ ವಸ್ತುಗಳನ್ನು ಜೆಸಿಬಿ ಯಂತ್ರದ ಸಹಾಯದಿಂದ ತೆರವು ಮಾಡಲಾಯಿತು.

ನಗರಸಭೆಯ ಅಧಿಕಾರಿಗಳು, ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅತಿಕ್ರಮಣ ಮಾಡುವುದನ್ನು ತಪ್ಪಿಸಲು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು. ಮುಂದಿನ ದಿನಗಳಲ್ಲಿ ಇಂತಹ ಅತಿಕ್ರಮಣ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು