ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಆಡಳಿತ ಅನುಭವ ಹೊಂದಿರುವ ಮಂಜುನಾಥ ಆರ್., ಈ ಹಿಂದೆ ಕಾರವಾರ, ಹಾವೇರಿ, ಯಾದಗಿರಿ, ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಜನಸ್ನೇಹಿ ಧೋರಣೆಯೊಂದಿಗೆ ಕರ್ತವ್ಯ ನಿರ್ವಹಿಸಿದ ಅಧಿಕಾರಿಯಾಗಿ ಅವರು ಗುರುತಿಸಿಕೊಂಡಿದ್ದಾರೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆ ಖಾಲಿಯಾಗಿದ್ದ ಹಿನ್ನೆಲೆ, ಸರ್ಕಾರ ಇವರನ್ನು ಈ ಹುದ್ದೆಗೆ ವರ್ಗಾವಣೆ ಮಾಡಿದ್ದು, ಇದೀಗ ಅಧಿಕೃತವಾಗಿ ಜವಾಬ್ದಾರಿ ಸ್ವೀಕರಿಸಿದ್ದಾರೆ.
ನಗರಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಸುಲಭ ಸೇವೆ ಒದಗಿಸುವುದು ತಮ್ಮ ಪ್ರಮುಖ ಗುರಿಯಾಗಿರುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.