ರಾಜ್ಯದಲ್ಲಿ ನಡೆಯುವ ಯಾವುದೇ ನೇಮಕಾತಿ ಅಥವಾ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಸಂಬಂಧಿತ ಜಿಲ್ಲೆಯ ಜಿಲ್ಲಾಧಿಕಾರಿಯನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಅಭ್ಯರ್ಥಿಗಳ ವಿಶ್ವಾಸವನ್ನು ಕಾಪಾಡುವುದು ಸರ್ಕಾರದ ಆದ್ಯತೆಯಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಅಕ್ರಮಗಳಿಗೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆಗಳು ನ್ಯಾಯಸಮ್ಮತವಾಗಿ ನಡೆಯುವಂತೆ ಜಿಲ್ಲಾಡಳಿತ ಮತ್ತು ಸಂಬಂಧಿತ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದೂ ಸೂಚಿಸಿದ್ದಾರೆ.
ಇತ್ತೀಚಿನ ಪರೀಕ್ಷಾ ಅಕ್ರಮಗಳ ಹಿನ್ನೆಲೆ ಸರ್ಕಾರ ಈ ಕಠಿಣ ನಿಲುವು ತೆಗೆದುಕೊಂಡಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಶಿಸ್ತು ಮತ್ತು ವಿಶ್ವಾಸ ಹೆಚ್ಚಿಸುವತ್ತ ಮಹತ್ವದ ಹೆಜ್ಜೆಯಾಗಿ ಈ ಘೋಷಣೆ ಪರಿಗಣಿಸಲಾಗುತ್ತಿದೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.