ಮಾಹಿತಿಯ ಪ್ರಕಾರ, ಸಚಿವರು ಕಾರವಾರದಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದ ತಕ್ಷಣವೇ ಸಚಿವ ಯು.ಟಿ. ಖಾದರ್ ಮಾನವೀಯತೆ ಪ್ರದರ್ಶಿಸಿ ಗಾಯಾಳುವಿಗೆ ತುರ್ತು ಚಿಕಿತ್ಸೆ ದೊರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ.
ಅಪಘಾತದಲ್ಲಿ ಅಂಕೋಲ ತಾಲೂಕಿನ ಅಲಗೇರಿ ಗ್ರಾಮದ ನಿವಾಸಿ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಅಂಕೋಲದ ಆರ್ಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಗೆ ಗಾಯವಾಗಿದ್ದರೂ ಸಕಾಲದಲ್ಲಿ ಚಿಕಿತ್ಸೆ ದೊರೆತ ಪರಿಣಾಮ ಅವರ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಮೂಲಗಳು ತಿಳಿಸಿವೆ.
ಈ ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.